Thursday, May 2, 2024
Homeಕರಾವಳಿಬೆಳ್ತಂಗಡಿ : ಪತಿಯಿಂದ ಪತ್ನಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಅಡಗಿ ಕುಳಿತಿದ್ದ ಪತಿ...

ಬೆಳ್ತಂಗಡಿ : ಪತಿಯಿಂದ ಪತ್ನಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಅಡಗಿ ಕುಳಿತಿದ್ದ ಪತಿ ಹೆಡೆಮುರಿ ಕಟ್ಟಿದ ಧರ್ಮಸ್ಥಳ ಪೊಲೀಸರು

spot_img
- Advertisement -
- Advertisement -

ಬೆಳ್ತಂಗಡಿ : ಶಿಶಿಲದಲ್ಲಿ ಪತಿಯಿಂದ ಪತ್ನಿ ಮತ್ತು ಮಗಳ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪತಿಯನ್ನು ವಶಕ್ಕೆ ಪಡೆಯುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ವಿವರ:ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕೋಟೆ ಬಾಗಿಲು ನಿವಾಸಿ ಸುರೇಶ್ ಗೌಡ(55) ಎಂಬಾತ ತನ್ನ ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ರಂದು ತಡರಾತ್ರಿ ನಡೆದಿದೆ.

ಮೂಲತಃ ಹಾವೇರಿ ಜಿಲ್ಲೆಯ  ನಿವಾಸಿ ಸುರೇಶ್ ಗೌಡ(55) ಕಳೆದ 22 ವರ್ಷದ ಹಿಂದೆ ಮೋಹಿನಿ (55) ಯನ್ನು ಮದುವೆಯಾಗಿದ್ದು. ಪತ್ನಿ ತಂದೆ ನೀಡಿದ ಜಾಗದಲ್ಲಿ ಮನೆ ಮಾಡಿ ವಾಸವಾಗಿದ್ದು. ಈ ದಂಪತಿಗಳಿಗೆ 19 ವರ್ಷದ ಮಗಳಿದ್ದು. ಆಕೆ ಸ್ಥಳೀಯ ಶಾಪ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದಾಳೆ. ಪತಿ ಕುಡಿದ ಮತ್ತಿನಲ್ಲಿ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕಚ್ಚಿ ನಂತರ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣನ್ನು ಸಂಪೂರ್ಣ ಹಾನಿಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ದಂಪತಿಗಳ ಮಗಳು ಪೂಜಾ(19) ಗೆ  ತಲೆಯಭಾಗಕ್ಕೆ ಮತ್ತು ಕಣ್ಣಿಗೆ ಹೊಡೆದಿದ್ದು, ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡಿದ್ದು ಮಗಳು ನೆರೆಯ ಮನೆಗೆ ಬಂದು ವಿಷಯ ತಿಳಿಸಿದಾಗ ವಿಪತ್ತು ನಿರ್ವಹಣಾ ತಂಡ, ನೆರೆಹೊರೆಯವರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಂತರ ಉಜಿರೆ ಖಾಸಗಿ ಆಸ್ಪತ್ರೆಗೆ ಡಿ.19 ರಂದು ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ‌ ಕೊಲೆಯತ್ನ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಘಟನೆ ಬಳಿಕ ತೋಟದಲ್ಲಿ ಅಡಗಿ ಕುಳಿತ್ತಿದ್ದ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಮರ್ಥ ಗಾಣಿಗೇರ ನೇತೃತ್ವದ ತಂಡದ ಸಿಬ್ಬಂದಿ ಶಶಿಧರ್ ಮತ್ತು ಮಲ್ಲಿಕಾರ್ಜುನ್  ಆರೋಪಿ ಸುರೇಶ್ ಗೌಡನನ್ನು ಡಿ.19 ರಂದು ವಶಕ್ಕೆ ಪಡೆದುಕೊಂಡಿದ್ದು. ಧರ್ಮಸ್ಥಳ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!