- Advertisement -
- Advertisement -
ಪುತ್ತೂರು;ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ.ಪಿ.ಭಟ್ ಅವರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾಸ್ಕರ್ ಮಣಿಯಾಣಿ ಎಂಬಾತ ಫೇಸ್ ಬುಕ್ ನಲ್ಲಿ ವೀಣಾ ಭಟ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ವೀಣಾ ಪೊಲೀಸರಿಗೆ ದೂರು ನೀಡಿದ್ದರು.
ವಿಚಾರಣೆ ವೇಳೆ ಭಾಸ್ಕರ್ ತಪ್ಪೊಪ್ಪಿಕೊಂಡಿದ್ದು, ವೀಣಾ ಅವರ ಬಳಿ ಕ್ಷಮೆ ಕೇಳಿದ ಕಾರಣ ಪ್ರಕರಣ ಇತ್ಯರ್ಥವಾಗಿರುವ ಬಗ್ಗೆ ವರದಿಯಾಗಿದೆ.
- Advertisement -