- Advertisement -
- Advertisement -
ಬಂಟ್ವಾಳ: ದಾರಿ ಕೇಳುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ.
ಈತ ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದರು.ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
- Advertisement -