Saturday, May 18, 2024
Homeಕರಾವಳಿಸುಳ್ಯದ ತೊಡಿಕಾನದಲ್ಲಿ ಮಹಿಳೆಗೆ ಕತ್ತಿಯಿಂದ ಕಡಿದು ಯುವಕ ಎಸ್ಕೇಪ್

ಸುಳ್ಯದ ತೊಡಿಕಾನದಲ್ಲಿ ಮಹಿಳೆಗೆ ಕತ್ತಿಯಿಂದ ಕಡಿದು ಯುವಕ ಎಸ್ಕೇಪ್

spot_img
- Advertisement -
- Advertisement -

ಸುಳ್ಯ : ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಮಹಿಳೆಗೆ ಯುವಕನೋರ್ವ ಕತ್ತಿಯಿಂದ ಕಡಿದು ಬಳಿಕ ಎಸ್ಕೇಪ್ ಆಗಿರುವ ಘಟನೆ ಸುಳ್ಯ ತಾಲೂಕಿನ ತೊಡಿಕಾನದಲ್ಲಿ ನಡೆದಿದೆ.  

ಸುಳ್ಯ ತಾಲೂಕು ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಎಂಬ ಮಹಿಳೆ ತೊಡಿಕಾನ ಶಾಲೆಯಲ್ಲಿ ಬಿಸಿಯೂಟದ ಸಿಬ್ಬಂದಿಯಾಗಿದ್ದು , ಸೆ. 9 ರಂದು ಸಂಜೆ ಕೆಲಸ ಮನೆಗೆ ಬರುತ್ತಿದ್ದಾಗ ಕಲ್ಲಂಬಳ ಬಸ್ ನಿಲ್ದಾಣದ ಬಳಿ ಕಾದು ಕುಳಿತಿದ್ದ ಸುರೇಂದ್ರ ಎಂಬ ಯುವಕ ಏಕಾಏಕಿ ಕತ್ತಿಯಿಂದ ಕಡಿದನೆನ್ನಲಾಗಿದೆ. ಯುವಕ ಹಾಗೂ ಮಹಿಳೆಯ ವಿಚಾರವಾಗಿ ವರ್ಷದ ಹಿಂದೆ ಎರಡೂ ಕಡೆಯವರ ಮಧ್ಯೆ ಹೊಡೆದಾಟ ನಡೆದಿದ್ದು ಅದೇ ವಿಚಾರದಲ್ಲಿ ಈಗ ಘಟನೆ ನಡೆದಿದೆ ಎನ್ನಲಾಗಿದೆ.

ಮಹಿಳೆಯ ಕತ್ತಿನ ಭಾಗಕ್ಕೆ ಕತ್ತಿ ಬೀಸಿದಾಗ ಆಕೆ ಕೈ ಅಡ್ಡಹಿಡಿದಿದ್ದು ಎರಡೂ ಕೈಗಳಿಗೆ ಕತ್ತಿಯೇಟು ಬಿತ್ತೆನ್ನಲಾಗಿದೆ. ಸೊಂಟದ ಭಾಗಕ್ಕೂ ಕತ್ತಿಯಿಂದ ಕಡಿದಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಹಿಳೆಗೆ ಯುವಕ ಕತ್ತಿಯಿಂದ ಕಡಿಯುವ ವೇಳೆ ಆಕೆ ರಸ್ತೆಯಲ್ಲಿ ಓಡಿದ್ದಾರೆ. ಈ ವೇಳೆ  ಯುವಕನ ತಂದೆಯೂ  ಮಹಿಳೆಯ ಮುಂದೆ ಕತ್ತಿ ಹಿಡಿದು ಬಂದಿದ್ದು  ಆಗ ಮಹಿಳೆ ಅಲ್ಲೇ ಪಕ್ಕದ ಮನೆಗೆ ಓಡಿ ಜಗುಲಿಯಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಕೂಡಲೇ ಮಹಿಳೆಯ ಮನೆಯವರು ಹಾಗೂ ಸ್ಥಳೀಯರು ಬಂದು ಆಕೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಬರುತ್ತಿದ್ದಂತೆ ಯುವಕ ತನ್ನ ಬೈಕ್ ಹತ್ತಿ ಪರಾರಿಯಾಗಿದ್ದಾನೆ. ಯುವಕ ಹಾಗೂ ಆತನ ತಂದೆಯ ಮೇಲೆ ಮಹಿಳೆ ದೂರು ನೀಡಿದ್ದು ಇಬ್ಬರೂ ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ.  ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!