ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ವಿವಾಹಿತ ಮಹಿಳೆಯ ಉಜಿರೆಯಲ್ಲಿರುವ ಬಟ್ಟೆ ಅಂಗಡಿ ಶಾಪ್ ಗೆ ಯುವಕನೊಬ್ಬ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
![](https://mahaxpress.com/wp-content/uploads/2024/06/WhatsApp-Image-2024-06-29-at-15.39.11-1024x575.jpeg)
ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಧರ್ಮಸ್ಥಳ ನಿವಾಸಿ ಅವಿವಾಹಿತ ಮಹಿಳೆಯ ಬಟ್ಟೆ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಧರ್ಮಸ್ಥಳದ ಕನ್ಯಾಡಿ ನಿವಾಸಿ ನವೀನ್ ಕನ್ಯಾಡಿ ಎಂಬಾತ ಹಣಕಾಸಿನ ವಿಚಾರದಲ್ಲಿ ಏಕಾಏಕಿ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.
![](https://mahaxpress.com/wp-content/uploads/2024/06/WhatsApp-Image-2024-06-29-at-15.39.12-1024x575.jpeg)
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಮಂದಿರದ ಮುಂದೆ ಇರುವ ಹೂವಿನ ವ್ಯಾಪಾರಿಯಾಗಿರುವ ನವೀನ್ ಕನ್ಯಾಡಿ ಎಂಬಾತ ಧರ್ಮಸ್ಥಳದ ವಿವಾಹಿತ ಮಹಿಳೆಯಿಂದ ಸಾಲವಾಗಿ ಪಡೆದ ಹಣವನ್ನು ವಾಪಸ್ ವಿವಾಹಿತ ಮಹಿಳೆ ಹಿಂದಿರುಗಿಸಲು ಹೇಳಿದಕ್ಕೆ ಏಕಾಏಕಿ ಉಜಿರೆಯ ಮಹಿಳೆಯ ಬಟ್ಟೆ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಕಪಳಕ್ಕೆ ಸೇರಿದಂತೆ ವಿವಿಧೆಡೆ ಹಲ್ಲೆ ಮಾಡಿರುವ ಬಗ್ಗೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
![](https://mahaxpress.com/wp-content/uploads/2024/06/WhatsApp-Image-2024-06-29-at-15.41.51-1024x461.jpeg)
ನವೀನ್ ಕನ್ಯಾಡಿ ಎಂಬಾತನಿಂದ ಹಲ್ಲೆಗೊಳಾಗಾದ ವಿವಾಹಿತ ಮಹಿಳೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ಮಾಡುವ ಸಿಸಿಕ್ಯಾಮೆರಾದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.