- Advertisement -
- Advertisement -
ಕೋಲಾರ: 21 ವರ್ಷದ ಬಾಡಿ ಬಿಲ್ಡರ್ ಒಬ್ಬ ನೇಣಿಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಜಯನಗರ ಬಡಾವಣೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಯಶವಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ.
ಯಶವಂತ್ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಬೆಂಗಳೂರಿನಲ್ಲಿ ಮೊದಲ ವರ್ಷದ ಎಂಬಿಎ ಕೋರ್ಸ್ಗೆ ದಾಖಲಾಗಿದ್ದ ಯಶವಂತ್, ದೈಹಿಕ ಕಸರತ್ತಿನ ಮೂಲಕ ಕಟ್ಟುಮಸ್ತಾದ ಮೈಕಟ್ಟು ಹೊಂದಿದ್ದ. ಆದರೆ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಆತ್ಮಹತ್ಯೆ ಹಿಂದೆ ಹಲವು ಅನುಮಾನಗಳು ಮೂಡಿದ್ದು, ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -