Sunday, May 5, 2024
Homeಕರಾವಳಿಹೆತ್ತ ತಾಯಿಯನ್ನು ಉಳಿಸಿಕೊಳ್ಳಲಾಗುತ್ತಿಲ್ಲ ಅನ್ನೋ ನೋವು: ಬಂಟ್ವಾಳದಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಹೆತ್ತ ತಾಯಿಯನ್ನು ಉಳಿಸಿಕೊಳ್ಳಲಾಗುತ್ತಿಲ್ಲ ಅನ್ನೋ ನೋವು: ಬಂಟ್ವಾಳದಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

spot_img
- Advertisement -
- Advertisement -

ಬಂಟ್ವಾಳ: ಅನಾರೋಗ್ಯದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ತನ್ನ ತಾಯಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನೊಂದು ವಾಟ್ಸಾಪ್ ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ.

ಅನಂತಾಡಿ ಪಂತಡ್ಕ ನಿವಾಸಿ ನೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಪಾಣೆಮಂಗಳೂರು ಸೇತುವೆಯಿಂದ ಯುವಕ ನಿನ್ನೆ ರಾತ್ರಿ ನದಿಗೆ ಹಾರಿದ್ದು, ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!