- Advertisement -
- Advertisement -
ಹಾಸನ: ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಒಂದರ ಹಿಂದೊಂದರಂತೆ ಎರಡು ದೊಡ್ಡ ಸ್ಫೋಟ ಪ್ರಕರಣಗಳು ನಡೆದಿದ್ದು, ಭಾರಿ-ನೋವೇ ಸಂಭವಿಸಿದೆ. ಇದೀಗ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನಿಬ್ಬರಿಗೆ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆ ಹಾಸನ ತಾಲೂಕು ಚಾಕೇನಹಳ್ಲಿಯಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಸಂಪತ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದರೆ, ನಟರಾಜ್ ಎಂಬಾತ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಕಾರ್ಮಿಕ ರವಿಕುಮಾರ್ಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತಪಟ್ಟಿರುವ ಇಬ್ಬರೂ ಹೊಳೆನರಸೀಪುರದ ಬೆಟ್ಟದಹಳ್ಳಿಯವರು ಎಂಬುದು ತಿಳಿದು ಬಂದಿದೆ.
- Advertisement -