- Advertisement -
- Advertisement -
ಮಡಿಕೇರಿ: ಬೇಟೆಗೆಂದು ತೆರಳಿದ್ದ ವ್ಯಕ್ತಿಯೊಬ್ಬ ಜೊತೆಯಲ್ಲಿದ್ದವನ ಗುಂಡೇಟಿಗೆ ಬಲಿಯಾದ ಘಟನೆ ಮಕ್ಕಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಮಡಿಕೇರಿ ತಾಲ್ಲೂಕು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಶಿವ ಬೋಪಣ್ಣ (37) ಎಂದು ಗುರುತಿಸಲಾಗಿದೆ.
ಬೇಟೆಯ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿದೆ ಎಂದು ತಪ್ಪೊಪ್ಪಿಕೊಂಡಿರುವ ಆರೋಪಿ ಮಡಿಕೇರಿಯ ನಿವಾಸಿ ದೇವಯ್ಯ ಪೊಲೀಸರಿಗೆ ಶರಣಾಗಿದ್ದಾನೆ. ಜೊತೆಯಲ್ಲಿದ್ದ ಶರಣ್ ಎಂಬುವವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -