Monday, April 29, 2024
Homeಕರಾವಳಿಮಂಗಳೂರು: ನಾಯಿ ಅಡ್ಡ ಬಂದು ಡಿವೈಡರ್ ಗೆ ಸ್ಕೂಟರ್ ಢಿಕ್ಕಿ: ಸ್ಕೂಟರ್ ಸವಾರ ಸಾವು

ಮಂಗಳೂರು: ನಾಯಿ ಅಡ್ಡ ಬಂದು ಡಿವೈಡರ್ ಗೆ ಸ್ಕೂಟರ್ ಢಿಕ್ಕಿ: ಸ್ಕೂಟರ್ ಸವಾರ ಸಾವು

spot_img
- Advertisement -
- Advertisement -

ಮಂಗಳೂರು: ನಾಯಿ ಅಡ್ಡ ಬಂದ ಪರಿಣಾಮ ಆಯತಪ್ಪಿದ ಸ್ಕೂಟರ್ ಡಿವೈಡರ್ ಗೆ ಢಿಕ್ಕಿ ಹೊಡೆದು ಸ್ಕೂಟರ್  ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ನಡೆದಿದೆ.  ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತ ದುರ್ದೈವಿ.

ನರಸಿಂಹ ಅವರು ಬೆಳಿಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡದಾಟಿದೆ. ನಿಯಂತ್ರಣ ತಪ್ಪಿ ಅವರು ನಾಯಿಗೆ ಢಿಕ್ಕಿ ಹೊಡೆದು ಬಿದ್ದು ಡಿವೈಡರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು.ಗಾಯಾಳುವನ್ನು ತಕ್ಷಣ ಎ.ಜೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಆದರೆ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!