- Advertisement -
- Advertisement -
ಸುಳ್ಯ; ಓಮ್ನಿ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಅರಂತೋಡಿನಲ್ಲಿ ನಡೆದಿದೆ.
ಅರಂತೋಡು ಗ್ರಾಮದ ಉಳುವಾರು ತೀರ್ಥರಾಮ ಮೃತ ದುರ್ದೈವಿ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮ್ನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು, ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಕೃಷಿಕರಾಗಿದ್ದು ಪತ್ನಿ ಪುತ್ರ ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ
- Advertisement -