- Advertisement -
- Advertisement -
ಸುಳ್ಯ; ವಿದೇಶ ಹೋಗಲು ಮಗನನ್ನು ಮಂಗಳೂರು ಏರ್ಪೋರ್ಟ್ ಗೆ ಬಿಟ್ಟು ಬರುವಾಗ ಕಾರು ಅಪಘಾತವಾಗಿ ತಂದೆ ಸಾವನ್ನಪ್ಪಿರುವ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ನಡೆದಿದೆ.
ವಿರಾಜಪೇಟೆಯ ಗಣೇಶ್ (64) ಮೃತ ದುರ್ದೈವಿ. ಇವರು ತಮ್ಮ ಮಗನನ್ನು ಮಂಗಳೂರಿನ ಏರ್ಪೋರ್ಟ್ಗೆ ಬಿಟ್ಟು ಬರುತ್ತಿದ್ದಾಗ ಈ ಅಪಘಾತ ಉಂಟಾಗಿದೆ. ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ ಗಂಭೀರ ಗಾಯಗಳಾಗಿತ್ತು.ಕೂಡಲೇ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮಗಳು ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
- Advertisement -