ಬೆಳ್ತಂಗಡಿ: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಾಂಡವರಕಲ್ಲಿನಲ್ಲಿ ನಡೆದಿದೆ. ಲೋಕೇಶ್ ಮೃತ ದುರ್ದೈವಿ.

ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಲೋಕೇಶ್ ನಿನ್ನೆ ರಜೆ ಮಾಡಿದ್ದರಿಂದ ಮಧ್ಯಾಹ್ನ 3 ಗಂಟೆ ವೇಳೆಗೆ ಮನೆಯಲ್ಲ ಊಟ ಮಾಡಿ ಮಲಗಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.