Saturday, July 5, 2025
HomeUncategorizedಬಿ.ಸಿ.ರೋಡ್ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ‌ ಸಾವು

ಬಿ.ಸಿ.ರೋಡ್ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ‌ ಸಾವು

spot_img
- Advertisement -
- Advertisement -

ಮಂಗಳೂರು: ಮಂಗಳೂರಿನ ಪಡೀಲ್‌ ನಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಿ.ಸಿ.ರೋಡ್‌ ಕೈಕುಂಜೆ ಪೂರ್ವಬಡಾವಣೆ ನಿವಾಸಿ, ಉಡುಪಿ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಕೆ.ಎನ್‌. ರಮೇಶ್‌(67) ಅವರು ನಿಧನರಾಗಿದ್ದಾರೆ.

ರಮೇಶ್‌ ಅವರು ಮೇ 7ರಂದು ಸಂಜೆ ಸ್ಕೂಟರ್‌ನಲ್ಲಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್‌ಗೆ ಹೋಗುತ್ತಿದ್ದಾಗ ಪಡೀಲ್‌ನಲ್ಲಿ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.‌‌ ಆದರೆ ಚಿಕಿತ್ಸೆ ಫ‌ಲಿಸದೆ ಅವರು ಮೃತಪಟ್ಟಿದ್ದಾರೆ.

ಭಾಲ್ಕಿ, ಹಾಸನ, ಬೆಳ್ತಂಗಡಿ, ಸುಳ್ಯ ಸೇರಿದಂತೆ ರಾಜ್ಯದ ವಿವಿಧೆಡೆ ಲೆಕ್ಕಾಧೀಕ್ಷಕ ಸಹಿತ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಉಡುಪಿ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಲ್ಲಿ ಜಿಲ್ಲಾ ಲೆಕ್ಕಪತ್ರ ಪರಿಶೋಧಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ

- Advertisement -
spot_img

Latest News

error: Content is protected !!