- Advertisement -
- Advertisement -
ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ ( 28 ) ಎಂದು ಗುರುತಿಸಲಾಗಿದೆ. ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 66 ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಬ್ಯಾರಿಕೇಡ್ ಗೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಬಳಿಕ ಅವರ ತಲೆ ಹೆದ್ದಾರಿ ಡಿವೈಡರ್ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಇದರಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ . ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ .
- Advertisement -