Saturday, June 28, 2025
Homeತಾಜಾ ಸುದ್ದಿಪುತ್ತೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು

ಪುತ್ತೂರು: ಮರದ ಕೊಂಬೆ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಪುತ್ತೂರು: ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ದುರ್ದೈವಿ.

ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತ ಬಾತಿಷ್ ಎಸ್‍ಕೆಎಸ್‍ಎಸ್‍ಎಫ್ ಸಕ್ರಿಯ ಸದಸ್ಯರಾಗಿದ್ದು, ತಾಯಿ, ಪತ್ನಿ, 6 ಮಂದಿ ಸಹೋದರರು, ಓರ್ವ ಸಹೋದರಿ ಹಾಗೂ 3 ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

- Advertisement -
spot_img

Latest News

error: Content is protected !!