Friday, March 29, 2024
Homeಕರಾವಳಿವಿಟ್ಲದ ಚಂದಳಿಕೆಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲದ ಚಂದಳಿಕೆಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಬಂಟ್ವಾಳ: ಇಲ್ಲಿನ ವಿಟ್ಲ ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ವ್ಯಕ್ತಿಯೋರ್ವರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಮನೆಯಲ್ಲೇ ಪತ್ತೆಯಾಗಿದ್ದು ಪ್ರಕರಣ ಅನುಮಾನ ಮೂಡಿಸಿದೆ. ಮೃತ ವ್ಯಕ್ತಿಯನ್ನು ಕಾಂತಾಮೂಲೆ ನಿವಾಸಿ ದಿನೇಶ್(45) ಎಂದು ಗುರುತಿಸಲಾಗಿದೆ.

ದಿನೇಶ್ ಅವರ ಮೃತದೇಹವು ಅವರ ಮನೆಯ ರೂಮ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿನೇಶ್ ಮತ್ತು ಅವರ ತಂದೆ ವಸಂತ ಗೌಡ ಇಬ್ಬರೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.

ಮನೆಯಲ್ಲಿ ತಂದೆ ಮಗ ಇಬ್ಬರೇ ವಾಸಮಾಡಿಕೊಂಡಿದ್ದು ಇಬ್ಬರು ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರಿಗೂ‌ ಕುಡಿತದ ಚಟ ಇದ್ದು ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ಕೊಲೆಯಾಗಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!