- Advertisement -
- Advertisement -
ಕಡಬ: ಮಾವಿನ ಮಿಡಿ ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ.ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48) ಮೃತ ದುರ್ದೈವಿ.
ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ಇವರು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯಲ್ಲಿ ಊರಿಗೆ ಬಂದಿದ್ದ ವೇಳೆ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -