ಉಡುಪಿ: 6ನೇ ಮಹಡಿಗೆ ವಾಟರ್’ಪ್ರೂಫಿಂಗ್ ಅಂತಾ ಹೋಗಿದ್ದಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿ ತಾಲ್ಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡು ಬಳಿ ನಡೆದಿದೆ. ಸಂತೋಷ್ (46) ಮೃತ ದುರ್ದೈವಿ.
ಸಂತೋಷ್ ವಾಟರ್ ಪ್ರೂಫಿಂಗ್ ಕೆಲಸವನ್ನು ಮಾಡಿಕೊಂಡಿದ್ದು ಡಿಸೆಂಬರ್ 2 ರಂದು ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ವಾಟರ್ ಪ್ರೂಫಿಂಗ್ ಕೆಲಸಕ್ಕೆ ಹೋಗಿದ್ದರು. ಸಂತೋಷ್ ರವರು ಮಧ್ಯಾಹ್ನ 2 ಗಂಟೆಗೆ ಊಟ ಮಾಡಿ ಕಟ್ಟಡದ ಆರನೇ ಅಂತಸ್ಥಿನ ಮೇಲಿರುವ ಟ್ಯಾಂಕಿಗೆ ವಾಟರ್ ಪ್ರೂಫಿಂಗ್ ಮಾಡಲು ತೆರಳಿದ್ದು, ಕೆಲಸವನ್ನು ಮುಗಿಸಿ ವಾಪಸ್ಸು ಕೆಳಗಡೆ ಬರಲು 6ನೇ ಅಂತಸ್ಥಿನ ಮೇಲೆ ಅಳವಡಿಸಿದ ಪಾಲಿಕಾರ್ಮರ್ ಶೀಟ್ ನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಅವುಗಳ ಮಧ್ಯ ಅಳವಡಿಸಿದ ಟ್ರಾನ್ಸ್ಪರೆಂಟ್ ಶೀಟ್ ಒಂದರ ಮೇಲೆ ಕಾಲು ಇಟ್ಟ ಕಾರಣ ಶೀಟ್ ತೆಳುವಿದ್ದದ್ದರಿಂದ ಸಂತೋಷ್ ರವರು ಆಯತಪ್ಪಿ 6 ನೇ ಅಂತಸ್ಥಿನ ಮೇಲ್ಚಾವಣಿನಿಂದ ನೇರ ನೆಲಕ್ಕೆ ಅಂಗಾತ ಬಿದ್ದು ತಲೆಗೆ ಕೈಗೆ ಪೆಟ್ಟಾದವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟ್ರಲ್ಲಿ ಅವರು ಸಾವನ್ನಪ್ಪಿದ್ದಾರೆ.