- Advertisement -
- Advertisement -
ದೊಡ್ಡಬಳ್ಳಾಪುರ; ಮರಕ್ಕೆ ನೇಣು ಹಾಕಿಕೊಳ್ಳುವಾಗ ಪಂಚೆ ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ಭಗತ್ಸಿಂಗ್ ಕ್ರೀಡಾಂಗಣದ ಸಮೀಪ ನಡೆದಿದೆ. ಇಲ್ಲಿದ್ದ ಮರವೊಂದಕ್ಕೆ ಸುಮಾರು 19 ವರ್ಷ ವಯಸ್ಸಿನ ಅಪರಿಚಿತ ಯುವಕನೊಬ್ಬ ತನ್ನ ಪಂಚೆಯಲ್ಲಿ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದು, ಈ ವೇಳೆ, ಪಂಚೆ ಹರಿದು, ಆತ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾನೆ.
ಯುವಕ ತನ್ನ ಪಂಚೆಯನ್ನು ಹರಿದು, ಅದನ್ನೇ ನೇಣು ಕುಣಿಕೆ ಮಾಡಿಕೊಂಡು, ಕುಣಿಕೆಗೆ ತಲೆಯೊಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಪಂಚೆ ಹರಿದಿದ್ದು, ಆತ ನೆಲಕ್ಕೆ ಬಿದ್ದಿದ್ದಾನೆ. ರಭಸದಿಂದ ನೆಲಕ್ಕೆ ಬಿದ್ದ ವೇಳೆ ಆತನ ತಲೆಗೆ ತೀವ್ರ ಪೆಟ್ಟು ಬಿದ್ದು, ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರದಲ್ಲಿ ಇಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.
- Advertisement -