Saturday, May 4, 2024
Homeಕರಾವಳಿಬೆಳ್ತಂಗಡಿ: ಮನೆಯಲ್ಲಿ ತೆಂಗಿನಕಾಯಿ ತೆಗೆಯುವಾಗ ಕಾಲು‌ ಜಾರಿ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮನೆಯಲ್ಲಿ ತೆಂಗಿನಕಾಯಿ ತೆಗೆಯುವಾಗ ಕಾಲು‌ ಜಾರಿ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಮನೆಯಲ್ಲಿ ತೆಂಗಿನಕಾಯಿ ತೆಗೆಯುವಾಗ ಕಾಲು‌ ಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಉಜಿರೆಯ ಪಾಲೆಂಜದಲ್ಲಿ ಇಂದು ಮಧ್ಯಾಹ್ನ ನಡೆದಿದೆ‌.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಲೆಂಜ ಮನೆಯ ಆನಂದ ಎಂಬವರು ಮನೆಯಲ್ಲಿ ತೆಂಗಿನ ಮರದಿಂದ ಕಾಯಿ ತೆಗೆಯಲು ಮರ ಹತ್ತಿದ್ದು ಈ ವೇಳೆ ಕಾಲು ಜಾರಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು ತಕ್ಷಣ ಮನೆಯವರು ಆಂಬುಲೆನ್ಸ್ ಮೂಲಕ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಆನಂದರವರ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನಂದ ಟಿಪ್ಪರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು ಮದುವೆಯಾಗಿ ಎರಡು ಮಕ್ಕಳಿದ್ದಾರೆ.

- Advertisement -
spot_img

Latest News

error: Content is protected !!