- Advertisement -
- Advertisement -
ಕಡಬ:ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಕುಟ್ರುಪ್ಪಾಡಿ ಗ್ರಾಮದ ಕೊಲ್ಯದ ಕಟ್ಟೆ ಎಂಬಲ್ಲಿ ಸಿ.ಪಿ.ಸೈಮನ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ನಾಗರಹಾಲ ಗ್ರಾಮದ ನಿರುಪಾದಿ ಘಟ್ಟನೂರು(44)ಮೃತ ವ್ಯಕ್ತಿ.
ನಿರುಪಾದಿ ಬೆಳಿಗ್ಗೆ ಕೆಲಸದವರೊಂದಿಗೆ ಊಟ ಮಾಡಿ ಕೆಲಸಕ್ಕೆ ಮುಂದಾಗುತ್ತಿದ್ದ ವೇಲೆ ಒಮ್ಮೆಲೆ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ಕೆಲಸಗಾರರು ಉಪಚರಿಸಿ ಜೀಪಿನಲ್ಲಿ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ ವೈದ್ಯರು ಪರಿಕ್ಷೀಸಿ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
- Advertisement -