- Advertisement -
![]()
- Advertisement -
ಬೆಳ್ತಂಗಡಿ; ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಶಕ್ತಿನಗರ ಕೋಲ್ಪೆದಬೈಲ್ ಮಾಲಾಡಿ ಎಂಬಲ್ಲಿ ನಡೆದಿದೆ. ನಾಗೇಶ್ ಕುಲಾಲ್( 33) ಮೃತ ವ್ಯಕ್ತಿ. ಅವರು ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದರು.
ಜ.14 ರಂದು ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
- Advertisement -


