- Advertisement -
- Advertisement -
ಮಂಗಳೂರು:ವ್ಯಕ್ತಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಪೊಲೀಸ್ ಸಿಬ್ಬಂದಿ ಸೇರಿ 4 ಮಂದಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟೆಕಾರು ಗ್ರಾಮದ ಕೊಂಡಾಣ ಎಂಬಲ್ಲಿ ಕರುಣಾಕರ ಪೂಜಾರಿ ಜಮೀನು ಖರೀದಿಸಿದ್ದು, ಈ ಜಮೀನಿಗೆ ಹೋಗಲು ರಸ್ತೆ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ಬಳಿಕ ರಸ್ತೆ ಮಾಡಿಸದೆ ವಂಚನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.ಇದೇ ವಿಚಾರಕ್ಕೆ ಹೆಡ್ಕಾನ್ಸ್ಟೇಬಲ್ ಭುವನೇಶ್ ಎಂಬವರು ಕರುಣಾಕರ ಪೂಜಾರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕರುಣಾಕರ ಪೂಜಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.ಆದರೆ ಪೊಲೀಸರು ಕ್ರಮಕೈಗೊಳ್ಳದ ಕಾರಣ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.ನ್ಯಾಯಾಲಯವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉಳ್ಳಾಲ ಪೊಲೀಸರಿಗೆ ನಿರ್ದೇಶನ ನೀಡಿದೆ ಎನ್ನಲಾಗಿದೆ.
- Advertisement -