Friday, May 17, 2024
Homeಕರಾವಳಿಉಡುಪಿಅಜೆಕಾರು: ಉದ್ಯೋಗವಿಲ್ಲದೆ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!

ಅಜೆಕಾರು: ಉದ್ಯೋಗವಿಲ್ಲದೆ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!

spot_img
- Advertisement -
- Advertisement -

ಅಜೆಕಾರು : ಉದ್ಯೋಗವಿಲ್ಲದೆ ಮನನೊಂದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲೆ ಕ್ರಾಸ್ ಎಂಬಲ್ಲಿ ಇಂದು ನಡೆದಿದೆ.

ಅಜೆಕಾರಿನ ನಿವಾಸಿ ಮೃತ್ಯುಂಜಯ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟಿದ್ದು , ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ . ಇದೇ ಖಿನ್ನತೆಯಲ್ಲಿ ಮನನೊಂದು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ . ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!