- Advertisement -
- Advertisement -
ಕಡಬ; ಮೂತ್ರ ವಿಸರ್ಜನೆಗೆ ತೆರಳಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಹೇಯ ಕೃತ್ಯ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಾಗೇಶ(24) ಬಂಧಿತ ಆರೋಪಿ.
ಈ ಕಾಮ ಪಿಶಾಚಿ ಮಹಾರಾಷ್ಟ್ರದ ಕೂಲಿ ಕಾರ್ಮಿರರೋರ್ವರ ಏಳು ವರ್ಷದ ಮಗಳು ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಅತ್ಯಾಚಾರದ ಬಳಿಕ ಬಾಲಕಿಗೆ ರಕ್ತಸ್ರಾವವಾಗಿ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಈ ವೇಳೆ ಪ್ರಕರಣ ಬಯಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.
- Advertisement -