Tuesday, May 7, 2024
Homeತಾಜಾ ಸುದ್ದಿಕನ್ನಡದ ಬಗ್ಗೆ ಅವಹೇಳನ ಮಾಡಿದವನಿಗೆ ಸಿಕ್ಕಿದ ಸನ್ಮಾನ ಹೇಗಿದೆ ನೋಡಿ....

ಕನ್ನಡದ ಬಗ್ಗೆ ಅವಹೇಳನ ಮಾಡಿದವನಿಗೆ ಸಿಕ್ಕಿದ ಸನ್ಮಾನ ಹೇಗಿದೆ ನೋಡಿ….

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನವಾಗುವ ಪ್ರಕರಣಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ. ಅದರಲ್ಲೂ ಹೊರ ರಾಜ್ಯದಿಂದ ಬಂದು ಇಲ್ಲೇ ಅನ್ನ ತಿಂದು ಕನ್ನಡದ ಬಗ್ಗೆನೇ ಮಾತನಾಡುವವರು ಒಬ್ಬಿಬ್ಬರಲ್ಲ. ಹೀಗೆ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ ವ್ಯಕ್ತಿಯೊಬ್ಬ ಬೆಂಗಳೂರಿನಲ್ಲಿ ಧರ್ಮದೇಟು ತಿಂದಿದ್ದಾನೆ.

ಬೆಂಗಳೂರಿನ ಗಾಂಧಿನಗರದ ತ್ರಿಭುವನ್ ಥಿಯೇಟರ್ ಬಳಿ ಈ ಘಟನೆ ನಡೆದಿದೆ. ತೆಲುಗು ಭಾಷೆ ಮಾತನಾಡುವ ವ್ಯಕ್ತಿಯೊಬ್ಬ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಧರ್ಮದೇಟು ಕೊಟ್ಟ ಬಳಿಕ ಸಾರ್ವಜನಿಕರೇ ಆ ವ್ಯಕ್ತಿಯನ್ನ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. ಇನ್ನು ವ್ಯಕ್ತಿಗೆ ಸ್ಥಳೀಯರು ಥಳಿಸುತ್ತಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

- Advertisement -
spot_img

Latest News

error: Content is protected !!