- Advertisement -
- Advertisement -
ಕಾಸರಗೋಡು : ತಮ್ಮನನ್ನು ಅಣ್ಣನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಕಾಸರಗೋಡಿನ ಸೀತಾಂಗೋಳಿಯ ಮುಗು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮುಗು ಉರ್ಮಿಯ ಅಬ್ದುಲ್ಲಾ ಮುಸ್ಲಿಯಾರ್ ಎಂಬವರ ಪುತ್ರ ನಿಸಾರ್ ( 35) ಕೊಲೆಯಾದವರು. ಆತನ ಅಣ್ಣ ರಫೀಕ್ ಎಂಬಾತ ಕೃತ್ಯದ ಬಳಿಕ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ನಿಸಾರ್ ನನ್ನು ಕುಂಬಳೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರ್ಲಿ ಮೃತಪಟ್ಟಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
- Advertisement -