- Advertisement -
- Advertisement -
ಮಂಗಳೂರು; ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾತನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಂಗಳೂರು ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ.
ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕಲ್ಲು ತೂರಾಟ ನಡೆಸುತ್ತಿದ್ದ ವಿಯಜಪುರ ಮೂಲದ ಸುಭಾಷ್ (55) ಎಂಬಾತನನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಆತನನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ 108 ವಾಹನ ಮೂಲಕ ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -