- Advertisement -
- Advertisement -
ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ.ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.ಕೊಲೆಯಾದವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.
- Advertisement -