- Advertisement -
- Advertisement -
ಕೇರಳ; ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಎರ್ನಾಕುಲಂ ಜರ್ನಲಿಸ್ಟ್ ಕಾಲನಿಯಾ ಸಜ್ಜನ್ ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಸಜ್ಜನ್ ಎಂಬಾತನನ್ನು ಆಂಟನಿ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಕಿರಣ್ ಎಂಬಾತನಿಗೆ ಗಾಯವಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಸಜ್ಜನ್ ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಬರಹವುಳ್ಳ ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಲು ಆಂಟೋನಿ ಮತ್ತು ಆತನ ಗ್ಯಾಂಗ್ ಸಜ್ಜನ್ ಮನೆಗೆ ಬಂದು ಬಳಿಕ ಜಗಳ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎನ್ನಲಾಗಿದೆ.
- Advertisement -