Saturday, May 18, 2024
Homeಕರಾವಳಿಕೇರಳದಲ್ಲೊಂದು ಅಮಾನುಷ ಘಟನೆ; ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸಹ ಪ್ರಯಾಣಿಕನಿಗೆ ಬೆಂಕಿ ಮೂವರನ್ನು ಬಲಿ ಪಡೆದ...

ಕೇರಳದಲ್ಲೊಂದು ಅಮಾನುಷ ಘಟನೆ; ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸಹ ಪ್ರಯಾಣಿಕನಿಗೆ ಬೆಂಕಿ ಮೂವರನ್ನು ಬಲಿ ಪಡೆದ ಪಾಪಿ

spot_img
- Advertisement -
- Advertisement -

ಕೇರಳ: ಪಾಪಿಯೊಬ್ಬ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಸಹ ಪ್ರಯಾಣಿಕನಿಗೆ ಬೆಂಕಿ ಮೂವರನ್ನು ಬಲಿ ಪಡೆದ ಘಟನೆ ಕೇರಳದ ಎಲತ್ತೂರ್ ರೈಲು ನಿಲ್ದಾಣದ ಬಳಿ ನಡೆದಿದೆ. ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಎಕ್ಸ್‌ಪ್ರೆಸ್ ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳದ ಬಳಿಕ ಓರ್ವ ವ್ಯಕ್ತಿ ಮತ್ತೊಬ್ಬ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ್ದಾರೆ. ಕಾಲ್ತುಳಿತ ಮತ್ತು ಸುಟ್ಟ ಗಾಯಗಳಿಂದ 3 ಮಂದಿ ಸಾವನ್ನಪ್ಪಿದ್ದಾರೆ ಮತ್ತು 9 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಮಹಿಳೆ ಮತ್ತು ಮಗು ಕೂಡ ಸೇರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಹಚ್ಚಿದ್ದ ವ್ಯಕ್ತಿ ರೈಲಿನ ಚೈನ್ ಎಳೆದು ಪರಾರಿಯಾಗಿದ್ದಾರೆ.

ಭಾನುವಾರ ರಾತ್ರಿ 9.45 ರ ಸುಮಾರಿಗೆ, ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಇಲ್ಲಿನ ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ, ಅಪರಿಚಿತ ವ್ಯಕ್ತಿಯೊಬ್ಬ ಸಹ-ಪ್ರಯಾಣಿಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮವಾಗಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಒಟ್ಟು ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!