Tuesday, May 7, 2024
Homeಕರಾವಳಿಉಡುಪಿಕಾಂಗ್ರೆಸ್ ಸರ್ಕಾರ ಬಂದ್ರೆ 200 ಯುನಿಟ್ ವಿದ್ಯುತ್ ಫ್ರೀ ಎಂದು ಘೋಷಣೆ; ಉಡುಪಿಯಲ್ಲಿ ಜೂನ್ ನಿಂದ...

ಕಾಂಗ್ರೆಸ್ ಸರ್ಕಾರ ಬಂದ್ರೆ 200 ಯುನಿಟ್ ವಿದ್ಯುತ್ ಫ್ರೀ ಎಂದು ಘೋಷಣೆ; ಉಡುಪಿಯಲ್ಲಿ ಜೂನ್ ನಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ ಎಂದು ಮೀಟರ್ ಬೋರ್ಡ್ ಗೆ ಚೀಟಿ ಅಂಟಿಸಿದ ವ್ಯಕ್ತಿ

spot_img
- Advertisement -
- Advertisement -

ಉಡುಪಿ: ಕಾಂಗ್ರೆಸ ಸರ್ಕಾರ ಬಂದ್ರೆ 200 ಯುನಿಟ್ ವಿದ್ಯುತ್ ಫ್ರೀ ಎಂದು ಘೋಷಣೆ  ಮಾಡಿರೋದರಿಂದ ಉಡುಪಿಯಲ್ಲಿ ಒಬ್ಬರು ಮೀಟರ್ ಬೋರ್ಡ್  ಗೆ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಚೀಟಿ ಬರೆದು ಮೆಸ್ಕಾಂಗೆ ಶಾಕ್ ನೀಡಿದ ಘಟನೆ ನಡೆದಿದೆ.

ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್​ ಬೋರ್ಡ್​ಗೆ ’ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ ಅಂಟಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದರೆ ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ಹೀಗಾಗಿ ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!