- Advertisement -
- Advertisement -
ಸುಳ್ಯ:: ಕೋವಿಯಿಂದ ತಾನೇ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಅರಂತೋಡು ಗ್ರಾಮದ ರವಿ ಮೃತ ಯುವಕ .
ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸ ಮಾಡಿಕೊಂಡಿದ್ದ ರವಿ ಕುಡಿತದ ದಾಸನಾಗಿದ್ದ. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿದ್ದ ರವಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ. ರವಿ ಅಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ತಕ್ಷಣ ಆಗಮಿಸಿ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
- Advertisement -