ಬೆಳ್ತಂಗಡಿ : ವಿವಾಹಿತ ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ವಿಡಿಯೋ ಮಾಡುತ್ತಾ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿದ್ದಾನೆ, ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ ದಾಖಲಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಹಾತ್ಮಾ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನಿಲ್(28) ಎಂಬತ ತನ್ನ ಹೀರೋ ಹೊಂಡಾ ಬೈಕ್ ನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದಾನೆ. ದೇವರ ದರ್ಶನ ಮುಗಿಸಿ ಮಧ್ಯಾಹ್ನದ ನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಕೃಷಿ ಜಾಮೀನಿಗೆ ಉಪಯೋಗಿಸುವ ರೌಂಡಾಪ್ ಎಂಬ ವಿಷ ಪದಾರ್ಥವನ್ನು ಕುಡಿದಿದ್ದಾನೆ. ನಂತರ ಅದರ ವಿಡಿಯೋ ಸಮೇತ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದಾನೆ. ಇದನ್ನು ನೋಡಿದ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸುಮಾರು 4:15 ಕ್ಕೆ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದಾಗ ಪೊಲೀಸರು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಸುನಿಲ್ ಮಾಲೀಕತ್ವದ ಚಪ್ಪಲ್ ಶಾಪ್ ಹೊಂದಿದ್ದು ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದ್ದು , ಗಂಡ ಹೆಂಡತಿ ನಡುವೆ ನಡೆದ ಜಗಳದಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.