- Advertisement -
- Advertisement -
ವಿಟ್ಲ; ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವುಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಮೇಗಿನಪೇಟೆ ನಿವಾಸಿ ಅಬ್ದುಲ್ ಖಾದರ್ ಯಾನೆ ಸೌಕತ್ (30) ಬಂಧಿತ ಆರೋಪಿ.
ನ.29 ರಂದು ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ದ್ರವ್ಯ ಸೇವನೆ ಮಾಡಿರುವ ಸಂಶಯದ ಮೇರೆಗೆ ವಶಕ್ಕೆ ಪಡೆದು ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.
ವೈದ್ಯಾಧಿಕಾರಿಗಳು ವೈದ್ಯಕೀಯ ದೃಢಪತ್ರ ನೀಡಿದ ಹಿನ್ನೆಲೆ ಆ ವ್ಯಕ್ತಿಯನ್ನು ಬಂಧಿಸಿ ಎನ್ ಡಿ ಪಿ ಎಸ್ ಆಕ್ಟ್ ನಂತೆ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -