Monday, April 29, 2024
Homeತಾಜಾ ಸುದ್ದಿಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

spot_img
- Advertisement -
- Advertisement -

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಮೂವರು ಸಜೀವ ದಹನವಾಗಿರುವ ದುರಂತ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.

ದುರಂತದಲ್ಲಿ ಶೇಖ್ ಫೈಸಲ್ (44), ಮೆಹಕ್ (33) ಮತ್ತು ಶೇಖ್ ಆಯಿಲ್ (11) ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಒಂದೇ ಕುಟುಂಬದವರು ಎನ್ನಲಾಗಿದೆ.

ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕಾರು ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದಿದ್ದರಿಂದಾಗಿ ಕ್ಷಣ ಮಾತ್ರದಲ್ಲಿ ಹೊತ್ತಿಕೊಂಡ ಬೆಂಕಿಯಿಂದ, ಕಾರಿನಲ್ಲಿದ್ದಂತ ಶೇಖ್ ಫಸಲ್, ಮೆಹಕ್ ಮತ್ತು ಶೇಕ್ ಆಯಿಲ್ ಎಂಬುವರು ಸಜೀವವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದ ಇಬ್ಬರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!