Friday, June 27, 2025
Homeಕರಾವಳಿಮಂಗಳೂರು: ಕರ್ತವ್ಯ ಲೋಪ ಎಸಗಿದ ಆರೋಪ; ವೆನ್ಲಾಕ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಲೋಕೇಶ್‌ ಅಮಾನತು

ಮಂಗಳೂರು: ಕರ್ತವ್ಯ ಲೋಪ ಎಸಗಿದ ಆರೋಪ; ವೆನ್ಲಾಕ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಲೋಕೇಶ್‌ ಅಮಾನತು

spot_img
- Advertisement -
- Advertisement -

ಮಂಗಳೂರು: ಕರ್ತವ್ಯ ಲೋಪ ಎಸಗಿರುವ ಆರೋಪದಡಿ  ವೆನ್ಲಾಕ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಲೋಕೇಶ್‌ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿದ್ದಲ್ಲದೆ ಮರು ಅನುಮೋದನೆಯನ್ನು ಪಡೆಯದೆ ಬಿಲ್ ಪಾವತಿಗಾಗಿ ಕಡತವನ್ನು ಮಂಡಿಸುವ ಮೂಲಕ ತನ್ನ ಕರ್ತವ್ಯವನ್ನು ನಿರ್ಲಕ್ಷಿಸಿದ ಆರೋಪದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಅಮಾನತ್ತಿನ ಅವಧಿಯಲ್ಲಿ ಲೋಕೇಶ್ ಕಚೇರಿಯ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡಬಾರದಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ.ಔಷಧ ಖರೀದಿಗಾಗಿ ಇ-ಟೆಂಡರ್ ಮೂಲಕ 26,04,914 ರೂ.ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ಲೋಕೇಶ್ ಮರು ಅನುಮೋದನೆ ಪಡೆಯದೆ 5,08,720 ರೂ. ದರಪಟ್ಟಿ ಮೂಲಕ ಖರೀದಿಸಿ ಬಿಲ್ ಪಾವತಿಗಾಗಿ ಕಡತ ಮಂಡಿಸಿದ ಆರೋಪ ಎದುರಿಸುತ್ತಿದ್ದನು. ಖರೀದಿಯ ವಿಧಾನ ಟೆಂಡರ್ ಎಂದಿರುವುದನ್ನು ಮರು ಅನುಮೋದನೆ ಪಡೆಯದೆ ಕೊಟೇಶನ್ ಎಂದು ನಿಯಮಬಾಹಿರವಾಗಿ ತಿದ್ದುಪಡಿ ಮಾಡಿ ಲೋಕೇಶ್ 4,33,315 ರೂ.ಮೊತ್ತಕ್ಕೆ ಔಷಧಗಳನ್ನು ಖರೀದಿಸಿ ಬಿಲ್ ಪಾವತಿಗಾಗಿ ಕಡತ ಮಂಡಿಸಿರುವುದನ್ನು ಕರ್ತವ್ಯಲೋಪವೆಂದು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!