Monday, June 30, 2025
Homeಕರಾವಳಿಅಫ್ಗಾನಿಸ್ತಾನದಿಂದ ಏರ್ ಲಿಫ್ಟ್ ಆದ ಕರಾವಳಿಯ 5 ಮಂದಿ; ಶೀಘ್ರದಲ್ಲೇ ತವರು ಜಿಲ್ಲೆಗೆ ಆಗಮನ!

ಅಫ್ಗಾನಿಸ್ತಾನದಿಂದ ಏರ್ ಲಿಫ್ಟ್ ಆದ ಕರಾವಳಿಯ 5 ಮಂದಿ; ಶೀಘ್ರದಲ್ಲೇ ತವರು ಜಿಲ್ಲೆಗೆ ಆಗಮನ!

spot_img
- Advertisement -
- Advertisement -

ಮಂಗಳೂರು: ತಾಲಿಬಾನ್‌ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರ ಪೈಕಿ 7 ಮಂದಿಯನ್ನು ರವಿವಾರ ಭಾರತಕ್ಕೆ ಏರ್‌ಲಿಫ್ಟ್‌ ಮಾಡಲಾಗಿದ್ದು, ಅವರಲ್ಲಿ ಐವರು ದಕ್ಷಿಣ ಕನ್ನಡದವರು, ಒಬ್ಬರು ಬೆಂಗಳೂರಿನವರು ಮತ್ತೂಬ್ಬರು ಬಳ್ಳಾರಿಯವರು.

ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಿಮಾನದ ಮೂಲಕ ಕರೆತರಲಾಗಿದ್ದು, ಈ ಪೈಕಿ ರಾಜ್ಯದ ಏಳು ಮಂದಿ ಕನ್ನಡಿಗರು ಸುರಕ್ಷಿತವಾಗಿ ದೇಶಕ್ಕೆ ಮರಳಿದ್ದಾರೆ. ಅವರಲ್ಲಿ ಐವರು ದಕ್ಷಿಣ ಕನ್ನಡದವರು, ಒಬ್ಬರು ಬೆಂಗಳೂರಿನವರು ಮತ್ತೂಬ್ಬರು ಬಳ್ಳಾರಿಯವರಾಗಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ಕನ್ನಡಿಗರು ಬಂದಿಳಿದಿದ್ದು, ಅಲ್ಲಿಂದ ಕರ್ನಾಟಕ ತಲುಪಲಿದ್ದಾರೆ.ಬಜಪೆಯ ದಿನೇಶ್‌ ರೈ, ಮೂಡುಬಿದಿರೆಯ ಜಗದೀಶ್‌ ಪೂಜಾರಿ, ಕಿನ್ನಿಗೋಳಿಯ ಡೆಸ್ಮಂಡ್‌ ಡೇವಿಸ್‌ ಡಿ’ಸೋಜಾ, ಉಳ್ಳಾಲದ ಪ್ರಸಾದ್‌ ಆನಂದ್‌ ಮತ್ತು ಮಂಗಳೂರು ಬಿಜೈಯ ಶ್ರವಣ್‌ ಅಂಚನ್‌ ಏರ್‌ಲಿಫ್ಟ್‌ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯವರು.

ಮಂಗಳೂರಿನ ಥೆರೇಸಾ ಕ್ರಾಸ್ಟಾಅವರು ಕಾಬೂಲ್‌ನಲ್ಲಿದ್ದು, ಅಲ್ಲಿಂದ ಇಟಲಿಗೆ ತೆರಳುವ ಇಚ್ಛೆಯನ್ನು ವಿದೇಶಾಂಗ ಸಚಿವಾಲಯದ ಮುಂದೆ ವ್ಯಕ್ತಪಡಿಸಿದ್ದಾರೆ.ಇನ್ನು ಚಿಕ್ಕಮಗಳೂರಿನ ಎನ್‌.ಆರ್‌.ಪುರದ ರಾಬರ್ಟ್‌ ಹಾಗೂ ಮಂಗಳೂರಿನ ಜೇರೋನಾ ಸಿಕ್ವೇರಾ ಕಾಬೂಲ್‌ ವಿಮಾನ ನಿಲ್ದಾಣದಲ್ಲಿಯೇ ಇದ್ದಾರೆ. ಶೀಘ್ರವೇ ಅವರು ರಾಜ್ಯಕ್ಕೆ ಮರಳಲಿದ್ದಾರೆ. ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಆಪ್ಘಾನಿಸ್ತಾನದಲ್ಲಿ ಕನ್ನಡಿಗರ ರಕ್ಷಣೆ ಕಾರ್ಯಾಚರಣೆ ಸಮನ್ವಯಾಧಿಕಾರಿಯೂ ಆಗಿರುವ ಎಡಿಜಿಪಿ ಉಮೇಶ್‌ ಕುಮಾರ್‌ ತಿಳಿಸಿದ್ದಾರೆ.

ಇನ್ನು ಪುತ್ತೂರು ಮೂಲದ ವ್ಯಕ್ತಿಯೊಬ್ಬರು ಅಮೆರಿಕದ ಮಿಲಿಟರಿ ನೆಲೆಯಲ್ಲಿದ್ದು, ಅವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರು ಮಿಲಿಟರಿ ಕ್ಯಾಂಟೀನ್‌ನಲ್ಲಿ ಅಡುಗೆಯವರಾಗಿದ್ದು, ಅವರ ಜತೆ ಇತರ ಅಧಿಕಾರಿಗಳೂ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂಬಾ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!