- Advertisement -
- Advertisement -
ಬಳ್ಳಾರಿ: ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಇದು ಉಗ್ರರ ಕೃತ್ಯ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದೊಂದು ವ್ಯವಸ್ಥಿತ ಜಾಲವಾಗಿದ್ದು, ಆ ಜಾಲವನ್ನು ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಎನ್ಐಎ, ಐಬಿ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಅವರ ಜಾಡನ್ನು ಹಿಡಿಯಲು ಎನ್ಐಎ, ತನಿಖೆ ಮುಂದುವರೆಸಿದೆ. ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ ಇದೆ ಎಂದಿದ್ದಾರೆ.
- Advertisement -