- Advertisement -
- Advertisement -
ತೀರ್ಥಹಳ್ಳಿ: ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಭಯೋತ್ಪಾದಕ ಸಂಘಟನೆಗಳ ಲಿಂಕ್ ಈ ಪ್ರಕರಣಕ್ಕೆ ಇರುವ ಶಂಕೆ ವ್ಯಕ್ತವಾಗಿದೆ. ಕೇಂದ್ರದ ತನಿಖೆ ಸಂಸ್ಥೆಗಳು ಕೂಡ ಘಟನೆಯ ಹಿನ್ನೆಲೆಯಲ್ಲಿ ತನಿಖೆ ಶುರು ಮಾಡಿವೆ ಎಂದಿದ್ದಾರೆ.
ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಅಡಿದ ಅವರು, ಕರಾವಳಿ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳು ಬಹಳಷ್ಟು ವರ್ಷಗಳಿಂದ ನಡೆಯುತ್ತಿದೆ. ಈ ಬಾರಿಯೂ ಇಂತಹ ಘಟನೆ ನಡೆದಾಗ ಹಳೆಯ ಹಿನ್ನೆಲೆಯಲ್ಲಿ ತನಿಖೆ ಆರಂಭವಾಗಿದೆ. ಶೀಘ್ರವಾಗಿ ಈ ಘಟನೆಗಳ ಹಿನ್ನೆಲೆ ತಿಳಿಯಲಿದೆ ಎಂದಿದ್ದಾರೆ.
- Advertisement -