- Advertisement -
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಸಿ.ಎಲ್. ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ವರ್ಗಾವಣೆಗೊಂಡ ಆಯುಕ್ತ ಆನಂದ್ ಸ್ಥಾನಕ್ಕೆ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆಯೇ ಆನಂದ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದ ಸಂಧರ್ಭದಲ್ಲಿ ವರ್ಗಾವಣೆ ಮಾಡಲಾಗಿತ್ತು. ಆದರೆ ಆ ಸಂಧರ್ಭದಲ್ಲಿ ಕೆಇಟಿ ಯಿಂದ ತಡೆಯಾಜ್ಞೆ ತಂದಿದ್ದ ಆನಂದ್, ಮಹಾನಗರ ಪಾಲಿಕೆಯಲ್ಲೇ ಮುಂದುವರೆದಿದ್ದರು.
ಅಲ್ಲದೇ, ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲೇ ಆನಂದ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಮಹಾನಗರ ಪಾಲಿಕೆ ಸದಸ್ಯರು ವರ್ಗಾವಣೆಗೆ ಒತ್ತಾಯಿಸಿದ್ದರು.
- Advertisement -