- Advertisement -
- Advertisement -
ಮಂಗಳೂರು: ನಾಳೆ ಮಂಗಳೂರು-ಗೋವಾ ವಂದೇ ಭಾರತ್ ರೈಲಿಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ದಕ್ಷಿಣ ರೈಲ್ವೇ ವಲಯದ ಅಧಿಕಾರಿಗಳು ಉಪಸ್ಥಿತರಿದ್ದರು. ನಾಳೆ ರೈಲಿಗೆ ಚಾಲನೆಯ ಜೊತೆಗೆ ಸೆಂಟ್ರಲ್ ರೈಲು ನಿಲ್ದಾಣದ ಹೊಸ 4 ಮತ್ತು 5ನೇ ಫ್ಲ್ಯಾಟ್ ಫಾರಂ ಕೂಡಾ ಲೋಕಾರ್ಪಣೆಯಾಗಲಿದೆ.
ಕರ್ನಾಟಕದ ನಾಲ್ಕನೇ ವಂದೇ ಭಾರತ್ ರೈಲು ಸಂಚಾರ ನಾಳೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ.
- Advertisement -