Friday, June 27, 2025
HomeUncategorizedಮಂಗಳೂರು: ಮಂದಿರಕ್ಕೆ ನುಗ್ಗಿ ಮಲ, ಮೂತ್ರ ವಿಸರ್ಜಿಸಿ ಅವಮಾನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಂದಿರಕ್ಕೆ ನುಗ್ಗಿ ಮಲ, ಮೂತ್ರ ವಿಸರ್ಜಿಸಿ ಅವಮಾನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

spot_img
- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಕೊಣಾಜೆಯಲ್ಲಿ ಆತಂಕ ಮೂಡಿಸಿದ್ದ ಹಲವು ದೇವಾಸ್ಥಾನಗಳ ಕಾಣಿಕೆ ಹುಂಡಿ ಕಳವು ಮತ್ತು ಕೊಣಾಜೆ ಬಳಿಯ ಗೋಪಾಕೃಷ್ಣ ಭಜನಾ ಮಂದಿರದಲ್ಲಿ ಮಲಮೂತ್ರ ಮಾಡಿ ಅಪವಿತ್ರಗೊಳಿಸಿದ ಕೃತ್ಯಕ್ಕೆ ಸಂಬoಧಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ತಲಪಾಡಿಯ ಕೊಮರಂಗಳ ನಿವಾಸಿ ಮಹಮ್ಮದ್ ಸುಹೈಲ್(19) ಹಾಗೂ ತಲಪಾಡಿಯ ಪಿಲಿಕೂರು ನಿವಾಸಿ ನಿಜಾಮುದ್ದೀನ್(21) ಎಂದು ಗುರುತಿಸಲಾಗಿದೆ. ಜ.26ರಂದು ಆರೋಪಿಗಳು ಸಂಶಯಾಸ್ಪದವಾಗಿ ತಿರುಗಾಡುವುದನ್ನು ಕಂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾವು ನಡೆಸಿದ ಕೃತ್ಯಗಳ ಬಗ್ಗೆ ಒಪ್ಪಿಕೊಂಡಿದ್ದಾರೆ.

ಪೋಲಿಸರು ವಿವಿಧ ಕಡೆಯ ಸಿಸಿಟಿವಿ ಫೂಟೇಜ್ ಮೂಲಕ ಇವರನ್ನು ಬೆನ್ನತ್ತಿ ಹೋದ ಸಂದರ್ಭ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಗೋಪಾಲಕೃಷ್ಣ ಮಂದಿರದ ಕಾಣಿಕೆ ಹುಂಡಿಯಿಂದ ಹಣ ಕಳವು ಮಾಡಲು ನುಗ್ಗಿದ್ದರು. ಆದರೆ, ಅಲ್ಲಿ ಯಾವುದೇ ಬೆಲೆಬಾಳುವ ಸೊತ್ತು ಸಿಕ್ಕಿರಲಿಲ್ಲ. ಕಾಣಿಕೆ ಡಬ್ಬಿ ಒಡೆದ ಕೃತ್ಯ ಬೇರೆ ಯಾರೋ ಮಾಡಿದ್ದಾರೆ ಎನ್ನುವ ರೀತಿ ಬಿಂಬಿಸಲು ಮಲ, ಮೂತ್ರ ವಿಸರ್ಜಿಸಿದ್ದರು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಕಳೆದ ನವೆಂಬರ್ ನಲ್ಲಿ ಕೊಣಾಜೆ ಮುಲಾರದ ಅರಸು ಮಂಡಿತ್ತಾಯ ದೈವ್ಥಾನದ ಕಾಣಿಕೆ ಡಬ್ಬಿ, ಜ.15ರಂದು ಮಾಡೂರಿನಲ್ಲಿ ಕಾಣಿಕೆ ಡಬ್ಬಿ, ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸೇವಾ ಕೌಂಟರ್ ಕಳ್ಳತನ, ಕುತ್ತಾರು ಕೊರಗಜ್ಜ ದೇವಸ್ಥಾನದಲ್ಲಿ ಕಳ್ಳತನ ಯತ್ನ ಮತ್ತು ಕೊಣಾಜೆ ಪೆರಂಡೆಯಲ್ಲಿನ ಗೋಪಾಲಕೃಷ್ಣ ಮಂದಿರದಲ್ಲಿ ಭಗವಧ್ವಜಕ್ಕೆ ಮಲಮೂತ್ರ ಮಾಡಿ ಅಪವಿತ್ರಗೊಳಿಸಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

“ಆರೋಪಿಗಳ ವಿರುದ್ದ ಪುಂಜಲಕಟ್ಟೆ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಕಂಕನಾಡಿ, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ. 9 ಪ್ರಕರಣಗಳಲ್ಲಿ ಐದು ದೇವಾಲಯದ ಕಳ್ಳತನ ಪ್ರಕರಣವಾಗಿದ್ದು ಇತರ ಪ್ರಕರಣದಲ್ಲಿ ಪೆಟ್ರೋಲ್ ಪಂಪ್ ಕಳ್ಳತನ ಪ್ರಕರಣವೂ ಸೇರಿದೆ. ಅಪರಾಧ ಮಾಡಲು ಬಳಸಿದ ಸ್ಕೂಟರ್, ದೇವಾಲಯಗಳ ಹುಂಡಿ ಪೆಟ್ಟಿಗೆಗಳು, ಚಾಕು ಮತ್ತು ಸ್ಪ್ಯಾನರ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ. ವಶಪಡಿಸಿಕೊಂಡ ಎಲ್ಲಾ ವಸ್ತುಗಳ ಒಟ್ಟು ಮೌಲ್ಯ 35,000 ರೂ. ಆಗಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!