Sunday, June 29, 2025
Homeಕರಾವಳಿಮಂಗಳೂರುಮಂಗಳೂರು; ಅಕ್ರಮವಾಗಿ ಪಿಸ್ತೂಲ್ ಇರಿಸಿಕೊಂಡಿದ್ದ ಇಬ್ಬರ ಬಂಧನ

ಮಂಗಳೂರು; ಅಕ್ರಮವಾಗಿ ಪಿಸ್ತೂಲ್ ಇರಿಸಿಕೊಂಡಿದ್ದ ಇಬ್ಬರ ಬಂಧನ

spot_img
- Advertisement -
- Advertisement -

ಮಂಗಳೂರು; ಅಕ್ರಮವಾಗಿ ಪಿಸ್ತೂಲ್ ಇರಿಸಿಕೊಂಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದಲ್ಲಿ ನಡೆದಿದೆ. ಕಾಸರಗೋಡಿನ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಮತ್ತು ಅಬ್ದುಲ್ ನಿಸಾರ್.ಕೆ(29) ಬಂಧಿತ ಆರೋಪಿಗಳು.

ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡು ಯಾವುದೋ ದುಷ್ಕೃತ್ಯ ನಡೆಸುವುದಕ್ಕಾಗಿ ತಿರುಗಾಡುತ್ತಿದ್ದರೆಂಬ  ಖಚಿತ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಪಿಸ್ತೂಲ್, ಸಜೀವ ಮದ್ದುಗುಂಡುಗಳು, ಮೊಬೈಲ್ ಫೋನುಗಳು, ಹಾಗೂ ಕಪ್ಪು ಬಣ್ಣದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 7,15,000 ರೂ.ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇನ್ನು ಬಂಧಿತ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳ ಹಾಗೂ ಅಕ್ರಮ ಪಿಸ್ತೂಲ್ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ ನೇತೃತ್ವದಲ್ಲಿ ನಡೆಸಲಾಗಿದೆ ಸಿಸಿಬಿ ಸಿಬ್ಬಂದಿ ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!