Thursday, May 2, 2024
Homeಕರಾವಳಿಮಂಗಳೂರು ವಿವಿ ಕಬಡ್ಡಿ ತಂಡಕ್ಕೆ ಬೆಳಗಾವಿಯಲ್ಲಿ ಸನ್ಮಾನ

ಮಂಗಳೂರು ವಿವಿ ಕಬಡ್ಡಿ ತಂಡಕ್ಕೆ ಬೆಳಗಾವಿಯಲ್ಲಿ ಸನ್ಮಾನ

spot_img
- Advertisement -
- Advertisement -

ಬೆಳಗಾವಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ವಿಜೇತರಾದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಸದಸ್ಯರನ್ನು ಬೆಳಗಾವಿಯಲ್ಲಿ ಸನ್ಮಾನಿಸಲಾಯಿತು.

ಸುವರ್ಣ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕ್ರೀಡಾ ಸಚಿವ ಬಿ. ನಾಗೇಂದ್ರ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!