ಮಂಗಳೂರು: ಪ್ಯಾಲೇಸ್ತೀನ್ನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ನರಮೇಧ ದಾಳಿಯನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದು, ಹಮಾಸ್ ಉಗ್ರರನ್ನು ಆತ ದೇಶ ಪ್ರೇಮಿಗಳೆಂದು ಕರೆದಿದ್ದಾನೆ.
ವಿಡಿಯೋ ಮೂಲಕ ಬೆಂಬಲಿಸಿದ ವ್ಯಕ್ತಿಯನ್ನು ಮಂಗಳೂರು ಮೂಲದ ಝಾಕಿರ್ ಎಂದು ಗುರುತಿಸಲಾಗಿದೆ. ಈತ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟಿದ್ದಾನೆ. ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದು, ಪ್ಯಾಲೇಸ್ತೀನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿದ್ದಾನೆ. ಅಲ್ಲದೇ ಹಮಾಸ್ ಉಗ್ರರನ್ನು ದೇಶ ಪ್ರೇಮಿ ಯೋಧರೆಂದು ಬಣ್ಣಿಸಿ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಸಾಮಾಜಿಕ ಜಾಲತಾಣದಲ್ಲಿ ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಝಾಕಿರ್ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದಾನೆ.
ಈಗಾಗಲೇ ಝಾಕಿರ್ ವೀಡಿಯೋಗೆ ಎಲ್ಲೆಡೆ ಭಾರೋ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗಿದ್ದು, ಝಾಕಿರ್ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.