Friday, June 27, 2025
Homeಆರಾಧನಾಬೃಹತ್‌ ಗೀತೋತ್ಸವದ ಮಂಗಳೋತ್ಸವ; ಉಪೇಂದ್ರ ಸೇರಿದಂತೆ ಹಲವು ಗಣ್ಯರು ಭಾಗಿ

ಬೃಹತ್‌ ಗೀತೋತ್ಸವದ ಮಂಗಳೋತ್ಸವ; ಉಪೇಂದ್ರ ಸೇರಿದಂತೆ ಹಲವು ಗಣ್ಯರು ಭಾಗಿ

spot_img
- Advertisement -
- Advertisement -

ಉಡುಪಿ: ಡಿ.29ರಂದು ರಾಜಾಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಬೃಹತ್‌ ಗೀತೋತ್ಸವದ ಮಂಗಳೋತ್ಸವು ನಡೆಯಿತು.

ಬೃಹತ್‌ ಗೀತೋತ್ಸವದ ಮಂಗಳೋತ್ಸವವನ್ನು ರಾಜಾಂಗಣದ ಪರಿಸರದಲ್ಲಿ ಗೀತಾ ಜ್ಞಾನ ದೀಪೋತ್ಸವದ ಜತೆಗೆ ಶ್ರೀಪಾದರು ಶ್ರೀ ಕೃಷ್ಣನಿಗೆ ಸಮರ್ಪಿಸಿದ ಪಾರ್ಥಸಾರಥಿ ಸುವರ್ಣ ರಥದ ಮಾದರಿಯ ಗೀತಾ ರಥವನ್ನು ಎಳೆಯುವ ಮೂಲಕ ವಿಶಿಷ್ಟವಾಗಿ ಮಂಗಳ್ಳೋತ್ಸವ ಆಚರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಹಾಗೆಯೇ ಕಾರ್ಯಕ್ರಮದಲ್ಲಿ 2025ರ ವಿಶ್ವಾವಸು ನಾಮ ಸಂವತ್ಸರದ ಶ್ರೀ ಪುತ್ತಿಗೆ ಮಠ ಪರ್ಯಾಯ ಪಂಚಾಂಗ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ದಿನೇಶ್‌, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣವರ್‌, ನಟ ಉಪೇಂದ್ರ, ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ,ಉದ್ಯಮಿಗಳಾದ ಮನೋಹರ್‌ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಸೇರಿ ಗಣ್ಯರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!