- Advertisement -
- Advertisement -
ಮಂಗಳೂರು: ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ಬರಿಗೆ ಇಂದು ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.
ಮಂಗಳೂರಿನಲ್ಲಿ ಎಲ್ಲಾ ಪತ್ರಕರ್ತರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಆ ಸಂದರ್ಭದಲ್ಲಿ ಇವರಿಬ್ಬರಿಗೆ ನೆಗೆಟಿವ್ ವರದಿ ಬಂದಿತ್ತು. ಆದರೆ ಇತ್ತೀಚೆಗೆ ಇಬ್ಬರಿಗೂ ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣದಿಂದ ಮತ್ತೊಮ್ಮೆ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಪ್ರಸ್ತುತ ಇಬ್ಬರು ಕೂಡಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
“ಕೊರೋನಾ ಮಹಾಮಾರಿಯ ಸಮಯದಲ್ಲಿ ಯೋಧರಂತೆ ಸೇವೆ ಸಲ್ಲಿಸಿ, ಕ್ಷಣ ಕ್ಷಣದ ಸುದ್ದಿಯನ್ನು ರಾಜ್ಯದ ಮನೆ ಮನೆಗಳಿಗೆ ತಲುಪಿಸುತ್ತಿರುವ ಪತ್ರಕರ್ತರಿಗೆ ಇಂದು ಸೋಂಕು ತಗುಲುತ್ತಿದೆ. ‘ಮಹಾ ಎಕ್ಸ್ಪ್ರೆಸ್’ನ ಹಿತೈಷಿಗಳಾಗಿರುವ ನಮ್ಮ ಈ ಎರಡು ಸ್ನೇಹಿತರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎನ್ನುವುದು ನಮ್ಮ ಪ್ರಾರ್ಥನೆ”
- Advertisement -