Wednesday, April 16, 2025
Homeಕರಾವಳಿಮಂಗಳೂರುಮಂಗಳೂರು: ತನ್ನ ವಿರುದ್ಧ ದೂರು ಕೊಟ್ಟಿದ್ದಾಳೆ ಎಂದು ಅಂಗಡಿಗೆ ಬೆಂಕಿ ಹಚ್ಚಿದ ಪಾಪಿ; ಗಾಯಗೊಂಡಿದ್ದ ಯುವತಿ...

ಮಂಗಳೂರು: ತನ್ನ ವಿರುದ್ಧ ದೂರು ಕೊಟ್ಟಿದ್ದಾಳೆ ಎಂದು ಅಂಗಡಿಗೆ ಬೆಂಕಿ ಹಚ್ಚಿದ ಪಾಪಿ; ಗಾಯಗೊಂಡಿದ್ದ ಯುವತಿ ಸಾವು

spot_img
- Advertisement -
- Advertisement -

ಮಂಗಳೂರು: ತನ್ನ ವಿರುದ್ಧ ದೂರು ಕೊಟ್ಟಿದ್ದಾಳೆ ಎಂದು ಯುವತಿಯ ಅಂಗಡಿಗೆ ಪಾಪಿಯೊಬ್ಬ ಬೆಂಕಿ ಹಚ್ಚಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವತಿಯೊಬ್ಬಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೇಡಡ್ಕದ ರಮಿತಾ (22) ಮೃತಪಟ್ಟ ಯುವತಿ. ಸಮೀಪದ ಪೀಠೋಪಕರಣ ಮಳಿಗೆ ಮಾಲಕ ತಮಿಳುನಾಡು ಮೂಲದ ರಾಮಕೃತ (57) ಬೆಂಕಿ ಹಚ್ಚಿದ ಪಾಪಿ.

ರಮಿತಾ ಬೇಡಡ್ಕ ಮನ್ನಡ್ಕ ಎಂಬಲ್ಲಿ ಈಕೆ ಅಂಗಡಿ ನಡೆಸುತ್ತಿದ್ದರು. ಅಲ್ಲೇ ರಾಮಕೃತನ ಪೀಠೋಪಕರಣ ಮಳಿಗೆಯಿದೆ. ಈತ  ಪಾನಮತ್ತನಾಗಿ ಕಿರುಕುಳ ನೀಡಿದರ ಕುರಿತು ರಮಿತಾ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಕೆರಳಿದ ರಾಮಕೃತ ಏ. 8 ರ ಸಂಜೆ 3 ಗಂಟೆಗೆ ರಮಿತಾ ಅಂಗಡಿಯೊಳಗೆ ನುಗ್ಗಿ ಆಕೆಯ ದೇಹಕ್ಕೆ ಟಿನ್ನ‌ರ್ ಸುರಿದು ಬೆಂಕಿ ಹಚ್ಚಿದ್ದ.ಪರಿಣಾಮ ಯುವತಿ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಮಿತಾ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.ಆ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.

- Advertisement -
spot_img

Latest News

error: Content is protected !!